ಭಾಗಂ 1

1 ಕ್ರಿಸ್ತನ ಪೌಲನು ದೇವರು ಆರಿಸಿಕೊಂಡವರ ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ. 2 ದೇವರು ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, 3 ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ಪ್ರಕಟಪಡಿಸಿದನು. ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾ 4 ನಮ್ಮ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ. ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯು, ಕರುಣೆಯು ಮತ್ತು ಶಾಂತಿಯು ಆಗಲಿ. ಸಭೆಯ ಹಿರಿಯರಲ್ಲಿ ಇರಬೇಕಾದ ಲಕ್ಷಣಗಳು 5 ನೀನು ಕ್ರೇತ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ ಪಟ್ಟಣಪಟ್ಟಣಗಳಲ್ಲೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲೇ ಬಿಟ್ಟು ಬಂದೆನಲ್ಲಾ 6 ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ಹೃದಯಪೂರ್ವಕವಾಗಿ ನಂಬಿದವರಾಗಿರಬೇಕು; ಅವರು ದುರ್ಮಾರ್ಗಿಗಳೂ, ವ್ಯಭಿಚಾರ ಮತ್ತು ಅವಿಧೇಯತೆಗೆ ಆರೋಪಿಗಳಾಗಿರಬಾರದು. 7 ಯಾಕೆಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ ಕುಡಿದು ಜಗಳಮಾಡುವವನೂ, ಹೊಡೆದಾಡುವವನೂ ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ, 8 ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೇವಭಕ್ತನೂ ಜಿತೇಂದ್ರಿಯನೂ ಆಗಿದ್ದು 9 9ತಾನು ಸುಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ ಕ್ರಿಸ್ತನ ಉಪದೇಶಕ್ಕನುಸಾರವಾಗಿ ನಂಬತಕ್ಕ ವಚನಗಳನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು. ಅಧಿಕಾರಕ್ಕೆ ಒಳಗಾಗದವರ ವಿಷಯದಲ್ಲಿ ತೀತನು ಮಾಡಬೇಕಾದದ್ದು 10 ಅನೇಕರು ಬರೀ ಮಾತುಗಾರರೂ, ಮೋಸಗಾರರೂ ಆಗಿದ್ದು ಕ್ರಿಸ್ತನ ಅಧಿಕಾರಕ್ಕೆ ಒಳಪಡದವರಾಗಿದ್ದಾರೆ; ಅವರೊಳಗೆ ಹೆಚ್ಚು ಜನರು ಸುನ್ನತಿಯವರು. 11 ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಮನೆ ಮನೆಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರನ್ನು ಅಡ್ಡಿಪಡಿಸುವುದು ಅಗತ್ಯವಾಗಿದೆ. 12 ಕ್ರೇತದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೇಬಾಕರೂ>> ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ. ಈ ಸಾಕ್ಷಿಯು ನಿಜವೇ ಆಗಿದೆ. 13 14 ಆದಕಾರಣ ಅವರು ಯೆಹೂದ್ಯರ ಕಟ್ಟುಕಥೆಗಳಿಗೂ ಅಸತ್ಯವಾದಿಗಳಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ ಕ್ರಿಸ್ತ ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು. 15 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸಾಕ್ಷಿಯೂ ಎರಡೂ ಮಲಿನವಾಗಿವೆ. 16 ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯ ಕೃತ್ಯಗಳನ್ನೆಸಗುವವರೂ, ಅವಿಧೇಯರೂ, ಸತ್ಕಾರ್ಯಗಳಿಗೆ ಅಪ್ರಯೋಜಕರೂ ಆಗಿರುವುದರಿಂದ ದೇವರನ್ನು ಅರಿಯದವರೆಂದು ತಮ್ಮ ಕೃತ್ಯಗಳಿಂದಲೇ ಹೇಳಿದಂತಾಯಿತು.