1 ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು. 2 ತಂದೆಯು ಗೊತ್ತುಮಾಡಿದ ದಿನದವರೆಗೂ ಪಾಲಕರ 3 ಮತ್ತು ಮನೆವಾರ್ತೆಯವರ ಅಧೀನದಲ್ಲಿರುವನು. ನಾವು ಸಹ ಬಾಲಕರಾಗಿದ್ದಾಗ ಲೋಕದವರ ಮೂಲತತ್ವಗಳಿಗೆ ಅಧೀನರಾಗಿದ್ದೆವು. 4 ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ 5 ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, 6 ಧರ್ಮಶಾಸ್ತ್ರಾಧೀನನಾಗಿಯೂ ಬಂದನು. ಪುತ್ರರಾಗಿರುವುದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ಪುತ್ರತ್ವದ 7 ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ. 8 ನಂಬಿಕೆಯ ಮೂಲಕ ಧರ್ಮಶಾಸ್ತ್ರದ ಬಂಧನದಿಂದ ಬಿಡುಗಡೆ ಹೊಂದಿರುವವರು ತಿರುಗಿ ಅವುಗಳಿಗೆ ಅಧೀನರಾಗಬಾರದು 9 ಈ ಮೊದಲು ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವುಗಳಿಗೆ ದಾಸರಾಗಿದ್ದೀರಿ. ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ. ವಿಶೇಷವಾಗಿ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. 10 ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ 11 ಏಕೆ ಬಯಸುತ್ತೀರಿ? ಆಯಾ ದಿನಗಳನ್ನೂ ತಿಂಗಳುಗಳನ್ನೂ ಉತ್ಸವಕಾಲಗಳನ್ನೂ ಸಂವತ್ಸರಗಳನ್ನೂ 12 ನಿಷ್ಠೆಯಿಂದ ಆಚರಿಸಿದ್ದೀರಿ. ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ 13 ಕುರಿತು ಭಯಪಡುತ್ತೇನೆ. ನಾನು ನಿಮ್ಮ ಹಾಗೆ ಆಗಿರುವುದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 14 ನೀವು ನನಗೇನೂ ಅನ್ಯಾಯ ಮಾಡಲಿಲ್ಲ. ನನ್ನ ದೈಹಿಕ ಅಸ್ವಸ್ಥತೆಯಿಂದಾಗಿ ನಾನು ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು 15 ನೀವು ಬಲ್ಲಿರಿ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ; 16 ನನ್ನನ್ನು ದೇವದೂತನಂತೆ ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ. ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? 17 ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ. ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು 18 ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ? ನಿಮ್ಮನ್ನು ಮೆಚ್ಚಿಸುವುದಕ್ಕೆ ತೀಕ್ಷ್ಣತೆಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗಾಗಿ ತೀಕ್ಷ್ಣತೆಯನ್ನು 19 ತೋರಿಸಬೇಕೆಂದು ಅವರು ನಿಮ್ಮನ್ನು ಹೊರಗೆ ತಳ್ಳಿ ಬಿಡಲು ಬಯಸುತ್ತಿದ್ದಾರೆ. ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ 20 ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ತೀಕ್ಷ್ಣತೆಯನ್ನು ತೋರಿಸುವುದು ಒಳ್ಳೆಯದೇ. ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು. 21 ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ವೈಖರಿಯನ್ನು 22 ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ! ಅಧೀನರಾಗಿರುವುದಕ್ಕೆ ಬಯಸುವವರೇ, ನೀವು ಧರ್ಮಶಾಸ್ತ್ರಕ್ಕೆ ಕಿವಿಗೊಡುವುದಿಲ್ಲವೋ? ನನಗೆ ತಿಳಿಯಪಡಿಸಿರಿ. 23 ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು; ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಧರ್ಮಪತ್ನಿಯಲ್ಲಿ ಹುಟ್ಟಿದವನು. 24 ಮಗನು ಸ್ವಾಭಾವಿಕವಾಗಿ ಹುಟ್ಟಿದವನು, ಧರ್ಮಪತ್ನಿಯ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು. ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು 25 ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು; ಅದೇ ಹಾಗರಳು. ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು 26 ಈಗಿನ ಯೆರೂಸಲೇಮಿಗೆ ಅದು ಹೋಲಿಕೆಯಾಗಿದೆ; ಹೇಗೆಂದರೆ ಅದು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದೆ. 27 ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ. ಬಂಜೆಯೇ, ಆನಂದಿಸು. ಪ್ರಸವ ವೇದನೆಯಿಲ್ಲದವಳೇ, 28 ಸ್ವರವೆತ್ತಿ ಕೂಗು; ಗಂಡನುಳ್ಳವಳಿಗಿಂತ ಒಬ್ಬೊಂಟಿಗಳಿಗೆ ಮಕ್ಕಳು ಹೆಚ್ಚು ಎಂದು ಬರೆದಿದೆಯಲ್ಲಾ ನಾವು 29 ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ. ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು ದೇವರಾತ್ಮಬಲದಿಂದ 30 ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ. ದೇವರ ವಾಕ್ಯವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. 31 ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದೆಂದು ದೇವರ ವಾಕ್ಯವು ಹೇಳುತ್ತದೆ.